
ಬೂಸ್ಟರ್ ಡೋಸ್ ಮುನಿಯಮ್ಮ
ಇಪ್ಪತ್ತನೆಯ ಶತಮಾನದ ನಲ್ವತ್ತರ ದಶಕದಲ್ಲಿ ಅಲ್ಬೆ ಕಮೂ ಬರೆದ ಆಧುನಿಕ ಕ್ಲಾಸಿಕ್ ಎಂದು ಪರಿಗಣಿಸಲಾಗುವ ದಿ ಪ್ಲೇಗ್ ಕೃತಿಯೂ ಮನುಷ್ಯರ ಅಸಹಾಯಕತೆ, ದಾರುಣತೆ, ದುಷ್ಟತನ ಮತ್ತು ಕರುಣೆಯನ್ನು ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಪರಿಶೀಲಿಸುತ್ತದೆ. ಕಾಯಿಲೆಯೊಂದು ರೂಪಕವಾಗಿ ಕೊಳೆತ ಸಮಾಜದ ಅಸ್ವಾಸ್ಥ್ಯವನ್ನು ಬೆಳಕಿಗೆ ತರುವುದೇ ಈ ಕೃತಿಯ ಮುಖ್ಯ ಆಶಯ. ಅದಾಗಿ ಏಳು ದಶಕದ ಬಳಿಕ ನಾವು ಬದುಕುತ್ತಿರುವ ವಿಶ್ವವು ಒಂದು ಜಾಗತಿಕ ಸಾಂಕ್ರಾಮಿಕವನ್ನು ಎದುರಿಸಿತು. ಇಂದು ಬದುಕುಳಿದಿರುವ ನಾವೆಲ್ಲ ಅದಕ್ಕೆ ಸಾಕ್ಷಿಯಾದೆವು. ಪತ್ರಕರ್ತರಾದ ಸಂತೆಕಸಲಗೆರೆ ಪ್ರಕಾಶ್ ಅವರು ಕೂಡ ಆ ಕಾಲಘಟ್ಟದ ಅನುಭವವನ್ನು ಕಥೆಗಳ ರೂಪದಲ್ಲಿ 'ಬೂಸ್ಟರ್ ಡೋಸ್ ಮುನಿಯಮ್ಮ' ಎಂಬ ಸಂಕಲನದ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಹನ್ನೆರಡು ಕಥೆಗಳ ಈ ಸಂಕಲನವು ಜಾಗತಿಕ ಮಹಾಮಾರಿಯ ರುದ್ರಭಯಾನಕತೆಯ ವಿವಿಧ ರೂಪವನ್ನು ಕಥೆಗಳಲ್ಲಿ ಹಿಡಿದಿರಲು ಯತ್ನಿಸುತ್ತದೆ. ಜಾಗತಿಕ ಕಾಯಿಲೆಯ ಸ್ವರೂಪ ಮನೆ-ಕುಟುಂಬ-ಗ್ರಾಮ-ನಗರದ ಬೀದಿಗಳಲ್ಲಿ ಹೇಗೆ ಕಾಣಿಸಿಕೊಂಡಿತು. ಯಾವ ಪರಿಣಾಮವನ್ನುಂಟು ಮಾಡಿತು ಎಂದು ಇಲ್ಲಿನ ಕಥೆಗಳು ಅರಿಯಲು ಪ್ರಯತ್ನಿಸುತ್ತವೆ.
-ಕೇಶವ ಮಳಗಿ
ಇಪ್ಪತ್ತನೆಯ ಶತಮಾನದ ನಲ್ವತ್ತರ ದಶಕದಲ್ಲಿ ಅಲ್ಬೆ ಕಮೂ ಬರೆದ ಆಧುನಿಕ ಕ್ಲಾಸಿಕ್ ಎಂದು ಪರಿಗಣಿಸಲಾಗುವ ದಿ ಪ್ಲೇಗ್ ಕೃತಿಯೂ ಮನುಷ್ಯರ ಅಸಹಾಯಕತೆ, ದಾರುಣತೆ, ದುಷ್ಟತನ ಮತ್ತು ಕರುಣೆಯನ್ನು ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಪರಿಶೀಲಿಸುತ್ತದೆ. ಕಾಯಿಲೆಯೊಂದು ರೂಪಕವಾಗಿ ಕೊಳೆತ ಸಮಾಜದ ಅಸ್ವಾಸ್ಥ್ಯವನ್ನು ಬೆಳಕಿಗೆ ತರುವುದೇ ಈ ಕೃತಿಯ ಮುಖ್ಯ ಆಶಯ. ಅದಾಗಿ ಏಳು ದಶಕದ ಬಳಿಕ ನಾವು ಬದುಕುತ್ತಿರುವ ವಿಶ್ವವು ಒಂದು ಜಾಗತಿಕ ಸಾಂಕ್ರಾಮಿಕವನ್ನು ಎದುರಿಸಿತು. ಇಂದು ಬದುಕುಳಿದಿರುವ ನಾವೆಲ್ಲ ಅದಕ್ಕೆ ಸಾಕ್ಷಿಯಾದೆವು. ಪತ್ರಕರ್ತರಾದ ಸಂತೆಕಸಲಗೆರೆ ಪ್ರಕಾಶ್ ಅವರು ಕೂಡ ಆ ಕಾಲಘಟ್ಟದ ಅನುಭವವನ್ನು ಕಥೆಗಳ ರೂಪದಲ್ಲಿ 'ಬೂಸ್ಟರ್ ಡೋಸ್ ಮುನಿಯಮ್ಮ' ಎಂಬ ಸಂಕಲನದ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಹನ್ನೆರಡು ಕಥೆಗಳ ಈ ಸಂಕಲನವು ಜಾಗತಿಕ ಮಹಾಮಾರಿಯ ರುದ್ರಭಯಾನಕತೆಯ ವಿವಿಧ ರೂಪವನ್ನು ಕಥೆಗಳಲ್ಲಿ ಹಿಡಿದಿರಲು ಯತ್ನಿಸುತ್ತದೆ. ಜಾಗತಿಕ ಕಾಯಿಲೆಯ ಸ್ವರೂಪ ಮನೆ-ಕುಟುಂಬ-ಗ್ರಾಮ-ನಗರದ ಬೀದಿಗಳಲ್ಲಿ ಹೇಗೆ ಕಾಣಿಸಿಕೊಂಡಿತು. ಯಾವ ಪರಿಣಾಮವನ್ನುಂಟು ಮಾಡಿತು ಎಂದು ಇಲ್ಲಿನ ಕಥೆಗಳು ಅರಿಯಲು ಪ್ರಯತ್ನಿಸುತ್ತವೆ.
-ಕೇಶವ ಮಳಗಿ
Description
ಇಪ್ಪತ್ತನೆಯ ಶತಮಾನದ ನಲ್ವತ್ತರ ದಶಕದಲ್ಲಿ ಅಲ್ಬೆ ಕಮೂ ಬರೆದ ಆಧುನಿಕ ಕ್ಲಾಸಿಕ್ ಎಂದು ಪರಿಗಣಿಸಲಾಗುವ ದಿ ಪ್ಲೇಗ್ ಕೃತಿಯೂ ಮನುಷ್ಯರ ಅಸಹಾಯಕತೆ, ದಾರುಣತೆ, ದುಷ್ಟತನ ಮತ್ತು ಕರುಣೆಯನ್ನು ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಪರಿಶೀಲಿಸುತ್ತದೆ. ಕಾಯಿಲೆಯೊಂದು ರೂಪಕವಾಗಿ ಕೊಳೆತ ಸಮಾಜದ ಅಸ್ವಾಸ್ಥ್ಯವನ್ನು ಬೆಳಕಿಗೆ ತರುವುದೇ ಈ ಕೃತಿಯ ಮುಖ್ಯ ಆಶಯ. ಅದಾಗಿ ಏಳು ದಶಕದ ಬಳಿಕ ನಾವು ಬದುಕುತ್ತಿರುವ ವಿಶ್ವವು ಒಂದು ಜಾಗತಿಕ ಸಾಂಕ್ರಾಮಿಕವನ್ನು ಎದುರಿಸಿತು. ಇಂದು ಬದುಕುಳಿದಿರುವ ನಾವೆಲ್ಲ ಅದಕ್ಕೆ ಸಾಕ್ಷಿಯಾದೆವು. ಪತ್ರಕರ್ತರಾದ ಸಂತೆಕಸಲಗೆರೆ ಪ್ರಕಾಶ್ ಅವರು ಕೂಡ ಆ ಕಾಲಘಟ್ಟದ ಅನುಭವವನ್ನು ಕಥೆಗಳ ರೂಪದಲ್ಲಿ 'ಬೂಸ್ಟರ್ ಡೋಸ್ ಮುನಿಯಮ್ಮ' ಎಂಬ ಸಂಕಲನದ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಹನ್ನೆರಡು ಕಥೆಗಳ ಈ ಸಂಕಲನವು ಜಾಗತಿಕ ಮಹಾಮಾರಿಯ ರುದ್ರಭಯಾನಕತೆಯ ವಿವಿಧ ರೂಪವನ್ನು ಕಥೆಗಳಲ್ಲಿ ಹಿಡಿದಿರಲು ಯತ್ನಿಸುತ್ತದೆ. ಜಾಗತಿಕ ಕಾಯಿಲೆಯ ಸ್ವರೂಪ ಮನೆ-ಕುಟುಂಬ-ಗ್ರಾಮ-ನಗರದ ಬೀದಿಗಳಲ್ಲಿ ಹೇಗೆ ಕಾಣಿಸಿಕೊಂಡಿತು. ಯಾವ ಪರಿಣಾಮವನ್ನುಂಟು ಮಾಡಿತು ಎಂದು ಇಲ್ಲಿನ ಕಥೆಗಳು ಅರಿಯಲು ಪ್ರಯತ್ನಿಸುತ್ತವೆ.
-ಕೇಶವ ಮಳಗಿ












