HomeStore

ಛಲಗಾರ ದುರ್ಯೋಧನ

Product image 1
1 / 2

ಛಲಗಾರ ದುರ್ಯೋಧನ

ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ 'ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ ಮಹಾಕಾವ್ಯದಲ್ಲಿ ಕಾಣಿಸಿಕೊಳ್ಳುವ ಪಾತ್ರಗಳು ಮಾನವ ಸಹಜ ಗುಣಗಳಿಂದ, ಭಾವಗಳಿಂದ ತೊಳಲಾಡುತ್ತ ನಮ್ಮ ಮಧ್ಯೆ ಈಗ ಕೂಡಾ ನಲಿದಾಡುತ್ತಿರುವಂತೆ ಭಾಸವಾಗುತ್ತದೆ. ಅವರ ಸಂಗದಲ್ಲಿ ನಮ್ಮ ವ್ಯಕ್ತಿತ್ವ ಇನ್ನಷ್ಟು ಹಸನಾಗುತ್ತದೆ, ಹಾಗೆಯೇ ದುಷ್ಟತನ, ಮಾತ್ಸರ್ಯದಂತಹ ದುರ್ಗುಣಗಳನ್ನು ತೊರೆಯಬೇಕೆಂಬ ಪ್ರಜ್ಞೆ ಜಾಗೃತವಾಗುತ್ತದೆ. ಮಹಾಭಾರತವನ್ನು ಕೇವಲ ದಾಯಾದಿ ಕಥೆಯೆಂದು ಭಾವಿಸದೇ ಮಾನವ ಜನಾಂಗಕ್ಕೆ ಸದಾ ಬೆಳಕು ತೋರುವ ಮಹಾಕೃತಿಯೆಂದು ವಿದ್ವಾಂಸರು ಪರಿಗಣಿಸಿದ್ದಾರೆ. ಈ ಮಾಲಿಕೆಯಲ್ಲಿ ಮಹಾಭಾರತದಲ್ಲಿ ಬರುವ ಹತ್ತು ಪ್ರಮುಖ ಪಾತ್ರಗಳ ಪರಿಚಯವನ್ನು ಕೊಡಲಾಗಿದೆ. ಕೃತಿಯ ಮಿತಿಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಹೇಳಲು ಪ್ರಯತ್ನಿಸಲಾಗಿದೆ. ಪ್ರತಿ ಪಾತ್ರದ ಕಥೆಯನ್ನು ಮೊದಲಿನಿಂದ ಕಡೆಯವರೆಗೆ ಸಮಗ್ರವಾಗಿ ಆದರೆ ಸಂಕ್ಷಿಪ್ತವಾಗಿ ನಿರೂಪಿಸಲು ಪ್ರಯತ್ನಿಸಲಾಗಿದೆ. ಓದುಗರು ಈ ಕೃತಿಯನ್ನು ಆದರದಿಂದ ಸ್ವೀಕರಿಸುವರೆಂಬ ನಂಬಿಕೆ ನಮ್ಮದು.

- ಪ್ರಕಾಶಕರು
ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ 'ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ ಮಹಾಕಾವ್ಯದಲ್ಲಿ ಕಾಣಿಸಿಕೊಳ್ಳುವ ಪಾತ್ರಗಳು ಮಾನವ ಸಹಜ ಗುಣಗಳಿಂದ, ಭಾವಗಳಿಂದ ತೊಳಲಾಡುತ್ತ ನಮ್ಮ ಮಧ್ಯೆ ಈಗ ಕೂಡಾ ನಲಿದಾಡುತ್ತಿರುವಂತೆ ಭಾಸವಾಗುತ್ತದೆ. ಅವರ ಸಂಗದಲ್ಲಿ ನಮ್ಮ ವ್ಯಕ್ತಿತ್ವ ಇನ್ನಷ್ಟು ಹಸನಾಗುತ್ತದೆ, ಹಾಗೆಯೇ ದುಷ್ಟತನ, ಮಾತ್ಸರ್ಯದಂತಹ ದುರ್ಗುಣಗಳನ್ನು ತೊರೆಯಬೇಕೆಂಬ ಪ್ರಜ್ಞೆ ಜಾಗೃತವಾಗುತ್ತದೆ. ಮಹಾಭಾರತವನ್ನು ಕೇವಲ ದಾಯಾದಿ ಕಥೆಯೆಂದು ಭಾವಿಸದೇ ಮಾನವ ಜನಾಂಗಕ್ಕೆ ಸದಾ ಬೆಳಕು ತೋರುವ ಮಹಾಕೃತಿಯೆಂದು ವಿದ್ವಾಂಸರು ಪರಿಗಣಿಸಿದ್ದಾರೆ. ಈ ಮಾಲಿಕೆಯಲ್ಲಿ ಮಹಾಭಾರತದಲ್ಲಿ ಬರುವ ಹತ್ತು ಪ್ರಮುಖ ಪಾತ್ರಗಳ ಪರಿಚಯವನ್ನು ಕೊಡಲಾಗಿದೆ. ಕೃತಿಯ ಮಿತಿಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಹೇಳಲು ಪ್ರಯತ್ನಿಸಲಾಗಿದೆ. ಪ್ರತಿ ಪಾತ್ರದ ಕಥೆಯನ್ನು ಮೊದಲಿನಿಂದ ಕಡೆಯವರೆಗೆ ಸಮಗ್ರವಾಗಿ ಆದರೆ ಸಂಕ್ಷಿಪ್ತವಾಗಿ ನಿರೂಪಿಸಲು ಪ್ರಯತ್ನಿಸಲಾಗಿದೆ. ಓದುಗರು ಈ ಕೃತಿಯನ್ನು ಆದರದಿಂದ ಸ್ವೀಕರಿಸುವರೆಂಬ ನಂಬಿಕೆ ನಮ್ಮದು.

- ಪ್ರಕಾಶಕರು
$0.43
ಛಲಗಾರ ದುರ್ಯೋಧನ
$0.43

Description

ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ 'ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ ಮಹಾಕಾವ್ಯದಲ್ಲಿ ಕಾಣಿಸಿಕೊಳ್ಳುವ ಪಾತ್ರಗಳು ಮಾನವ ಸಹಜ ಗುಣಗಳಿಂದ, ಭಾವಗಳಿಂದ ತೊಳಲಾಡುತ್ತ ನಮ್ಮ ಮಧ್ಯೆ ಈಗ ಕೂಡಾ ನಲಿದಾಡುತ್ತಿರುವಂತೆ ಭಾಸವಾಗುತ್ತದೆ. ಅವರ ಸಂಗದಲ್ಲಿ ನಮ್ಮ ವ್ಯಕ್ತಿತ್ವ ಇನ್ನಷ್ಟು ಹಸನಾಗುತ್ತದೆ, ಹಾಗೆಯೇ ದುಷ್ಟತನ, ಮಾತ್ಸರ್ಯದಂತಹ ದುರ್ಗುಣಗಳನ್ನು ತೊರೆಯಬೇಕೆಂಬ ಪ್ರಜ್ಞೆ ಜಾಗೃತವಾಗುತ್ತದೆ. ಮಹಾಭಾರತವನ್ನು ಕೇವಲ ದಾಯಾದಿ ಕಥೆಯೆಂದು ಭಾವಿಸದೇ ಮಾನವ ಜನಾಂಗಕ್ಕೆ ಸದಾ ಬೆಳಕು ತೋರುವ ಮಹಾಕೃತಿಯೆಂದು ವಿದ್ವಾಂಸರು ಪರಿಗಣಿಸಿದ್ದಾರೆ. ಈ ಮಾಲಿಕೆಯಲ್ಲಿ ಮಹಾಭಾರತದಲ್ಲಿ ಬರುವ ಹತ್ತು ಪ್ರಮುಖ ಪಾತ್ರಗಳ ಪರಿಚಯವನ್ನು ಕೊಡಲಾಗಿದೆ. ಕೃತಿಯ ಮಿತಿಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಹೇಳಲು ಪ್ರಯತ್ನಿಸಲಾಗಿದೆ. ಪ್ರತಿ ಪಾತ್ರದ ಕಥೆಯನ್ನು ಮೊದಲಿನಿಂದ ಕಡೆಯವರೆಗೆ ಸಮಗ್ರವಾಗಿ ಆದರೆ ಸಂಕ್ಷಿಪ್ತವಾಗಿ ನಿರೂಪಿಸಲು ಪ್ರಯತ್ನಿಸಲಾಗಿದೆ. ಓದುಗರು ಈ ಕೃತಿಯನ್ನು ಆದರದಿಂದ ಸ್ವೀಕರಿಸುವರೆಂಬ ನಂಬಿಕೆ ನಮ್ಮದು.

- ಪ್ರಕಾಶಕರು
ಛಲಗಾರ ದುರ್ಯೋಧನ | Harivu Books